Friday, February 13, 2009

ಸಂಪೂರ್ಣ ರಕ್ಷಣೆ

ಒಂದು ವ್ಯಾಪಾರಿ ಸಂಸ್ಥೆಯ ನೌಕರರು ವರ್ಷಾಂತ್ಯದ ಪ್ರವಾಸ ಹೊರಟಿದ್ದರು. ಮೈಸೂರು, ಬೆಂಗಳೂರು, ಊಟಿ.
ಅಲ್ಲಿ ಹಿಂದೂಗಳಿದ್ದರು. ಮುಸ್ಲಿಮರು, ಕ್ರೈಸ್ತರು ಕೂಡ.
ಬಸ್ಸು ನಗರ ಬಿಡುತ್ತಿದ್ದಂತೆ ಅದನ್ನು ಗುಂಪೊಂದು ನಿಲ್ಲಿಸಿತು. ಕೆಂಪು ತಿಲಕ ಹಚ್ಚಿ ದೊಣ್ಣೆ ಹಿಡಿದ ಗುಂಪು ಒಳಗೆ ನುಗ್ಗಿತು.
ಕಾರಣ : ಹಿಂದೂ ಹುಡುಗಿಯರು ಮುಸ್ಲಿಮರ ಜತೆಗೆ ಪ್ರವಾಸ ಹೊರಟದ್ದು.
ದಾಳಿ ಮಾಡಿದವರು : ಯಥಾಪ್ರಕಾರ, ಸಂಸ್ಕೃತಿ ರಕ್ಷಕರು.
ಪರಿಣಾಮ : ಹುಡುಗ- ಹುಡುಗಿಯರ ಮೇಲೆ ಹಲ್ಲೆ. ಅವರು ಧರಿಸಿದ್ದ ಆಭರಣಗಳ ಲೂಟಿ.
ಗುಂಪಿನ ನಾಯಕನ ಕಣ್ಣು ಒಬ್ಬ ಮಹಿಳೆ ಧರಿಸಿದ್ದ ಆಭರಣದ ಮೇಲೆ ಬಿತ್ತು. ‘ಅದನ್ಯಾಕೆ ಬಿಟ್ಟಿದ್ದೀ, ಕಿತ್ತುಕೋ...’ ಕಾರ್‍ಯಕರ್ತನಿಗೆ ಆದೇಶಿಸಿದ.
"ಅಣ್ಣಾ, ಅದು ತಾಳಿ..."
"ಏನಾದರೇನು, ಚಿನ್ನ ತಾನೆ ? ಕಿತ್ತುಕೋ"
ತಾಳಿಯನ್ನು ಕಿತ್ತುಕೊಂಡು ಸಂಸ್ಕೃತಿ ರಕ್ಷಣೆಯನ್ನು ಸಂಪೂರ್ಣಗೊಳಿಸಲಾಯಿತು.
(೨೦೦೬ರಲ್ಲಿ ಮಂಗಳೂರಿನಲ್ಲಿ ನಡೆದ ನಿಜ ಘಟನೆ)

3 comments:

KANASU said...
This comment has been removed by a blog administrator.
Anonymous said...

Harish,
Nimma lekhanakkoo Nagthihalliyavara commentigoo enu sambandha antha gothhaglilla. Dayavittu thilisi
- Suresh Kota

ಹರೀಶ್ ಕೇರ said...

suresh,
Nothing interesting.
comment deleted.
-Harish Kera