Sunday, February 22, 2009

ನಾಲಗೆಯ ಮೇಲೆ ಕುರುಕ್ಷೇತ್ರ

ಮಹಾಭಾರತದ ಹರಿಕತೆ ನಡೆದಿರುವಾಗ
ದಾಸರು ನಾಲಗೆ ತಪ್ಪಿ
ನಾಗರಿಕತೆ ಎಂದರೆ ಹಿಂಸೆಯ ಕತೆ
ಎಂದುಬಿಟ್ಟರು

ಆಮೇಲೆ ಚಡಪಡಿಸಿದರು
ತಮ್ಮ ಮಾತನ್ನು ಅಲ್ಲೇ ಬಿಡುವುದೋ
ವ್ಯಾಖ್ಯಾನಿಸುವುದೋ ಅರಿಯದ ಸಂದಿಗ್ದದಲ್ಲಿ
ಮುಂದೆ ಕುಳಿತ ಮಂದಿಯ ಮುಖ ನೋಡಿದರು

ಉದ್ದ ಅಡ್ಡ ನಾಮಗಳು ಮುದ್ರೆಗಳು
ಮುಗಿದ ಕೈಗಳು ಬೋಳಿಸಿದ ತಲೆಗಳು
ಬಿಟ್ಟ ಮೈ ಹೊದ್ದ ಶಲ್ಯ ಇಣುಕುವ ಜನಿವಾರ
ಬೊಜ್ಜು ಮೈ ಹುಳಿ ತೇಗು
ತರಹೇವಾರಿ ಶಿಖೆಗಳು
ಕಾಸಿನಗಲದ ಕುಂಕುಮ ತಲೆಗೆ ಸೆರಗು
ಮುತ್ತೈದೆಯರ ಸಕಲ ಭೂಷಿತಗಳು

ಮಾತುಗಳು ಗಂಟಲಲ್ಲೇ ಉಳಿದವು
ಕುರುಕ್ಷೇತ್ರದ ನೆತ್ತರ ನದಿ ಹಾಗೇ ಮುಂದುವರಿಯಿತು

ಬಾಯಿ ಬಿಡುವ ಭೂಮಿ ಎದೆ ಸೀಳಿದ ಗದೆ
ನೀರ ತಡಿಯಲ್ಲಿ ಅನಾಥ ಹೆಣ ಕತ್ತಲಲ್ಲಿ ಕುಣಿವ ಕತ್ತಿ
ಧರ್ಮದ ವಿಜಯಕ್ಕೆ ನಾರಿಯರ ಆರ್ತನಾದದ ಬೆಂಬಲ
ಭಗ್ನ ಬ್ರಹ್ಮಾಸ್ತ್ರಕ್ಕೆ ಅರ್ಧ ಭ್ರೂಣ

ಇತ್ತೀಚೆಗೆ ದಾಸರು
ವಿಪರೀತ ತಡವರಿಸುತ್ತಾರೆ
ಅನ್ನುತ್ತಾರೆ ಎಲ್ಲರೂ

6 comments:

ಸುಧನ್ವಾ ದೇರಾಜೆ. said...

good poem. thank u.

Anonymous said...

ಚೆನ್ನಾಗಿದೆ ಕವನ..ಆದ್ರೆ, ಯಾಕೋ ಅಪರೂಪವಾಗ್ತಿದೆಯಲ್ವಾ?

.... ಹರಿದಾಸ

Anonymous said...

ಕೊಂಚ ಗದ್ಯ, ಕೊಂಚ ಪದ್ಯ... ನಾಟ್ ಬ್ಯಾಡ್ !
-ವಿಲಾಸ್ ಕುಮಾರ್

Anonymous said...

ninne vidhanasabheyalli doddarangegowdaru vachisida kavanakke ''kelavaru'' meju kuttidaranthe!!... koneya punch line oduvaga yako nenapaythu. -dinesh kukkujadka

Anonymous said...

ನಮಸ್ತೆ.. .. ಅಮ್ಮನ ಹಬ್ಬಕ್ಕೆ ಆಮಂತ್ರಿಸಲು ನಿಮ್ಮ ಮನೆಗೆ ಬಂದೆ.. ದಯವಿಟ್ಟು ಬಿಡುವು ಮಾಡಿಕೊಂಡು ಬನ್ನಿ.. ವಿವರಗಳಿಗೆ ನನ್ನ ಬ್ಲಾಗ್ http://minchulli.wordpress.com ನೋಡಿ. ಮರೆಯದೆ ಬನ್ನಿ... ನಿಮ್ಮ ಆಪ್ತರಿಗೆಲ್ಲ ಈ ವಿಚಾರ ಹೇಳಿ ಸಾಧ್ಯವಾದರೆ ಕರೆದುಕೊಂಡು ಬನ್ನಿ.

ಶುಭವಾಗಲಿ,
- ಶಮ, ನಂದಿಬೆಟ್ಟ

Anonymous said...

kavana odi biddu biddu nakke. e kavana mattello odida nenapu. naguva kavanagalanne mattastu bareyiri. kavana chennagide.
chandrakala